FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday 26 July 2016

ತರಕಾರಿ ಬೀಜ ವಿತರಣೆ

         ಮೀಂಜ ಪಂಚಾಯತಿನ ಕೃಷಿ ಇಲಾಖೆಯಿಂದ ಶಾಲಾ ಮಕ್ಕಳಿಗೆ ತರಕಾರಿ ಬೀಜಗಳನ್ನು ವಿತರಿಸಲಾಯಿತು. ಕೃಷಿ ಇಲಾಖೆಯ ಅಧಿಕಾರಿಗಳು ಬೀಜಗಳನ್ನು ವಿತರಿಸಿದರು.




ಮುಖ್ಯೋಪಾಧ್ಯಾಯರ ಹೊಣೆಗಾರಿಕೆಯ ಬದಲಾವಣೆ

            ತಾ. 26-07-2016 ನೇ ಮಂಗಳವಾರದಂದು ನಮ್ಮ ಶಾಲೆಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಾಯರ್ ಕಟ್ಟೆಗೆ ವರ್ಗಾವಣೆಗೊಂಡ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್ ರವರು ತಮ್ಮ ಹೊಣೆಗಾರಿಕೆಯನ್ನು ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿ ನಮ್ಮ ಶಾಲೆಗೆ ಬಂದ ಶ್ರೀ ವಿನೋದ್ ಕುಮಾರ್ ಬಿ ರವರಿಗೆ ಶಾಲಾ 'ಕೀ'ಯನ್ನು ಹಸ್ತಾಂತರಿಸುವ ಮೂಲಕ ನೀಡಿದರು.




Friday 22 July 2016

ಉಚಿತ ಸಮವಸ್ತ್ರ ವಿತರಣೆ

             ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ನೀಡಲಾಗುವ ಉಚಿತ ಸಮವಸ್ರಗಳ ವಿತರಣಾ ಕಾರ್ಯಕ್ರಮವು ಶಾಲಾ ಪಿ.ಟಿ.ಎ ಅಧ್ಯಕ್ಷೆ ಶ್ರೀಮತೀ ಸೌಮ್ಯಲತಾ ರವರ ಅಧ್ಯಕ್ಷತೆಯಲ್ಲಿ ಜರಗಿತು. ಸಮವಸ್ತ್ರವನ್ನು ವಾರ್ಡ್ ಸದಸ್ಯೆ ಶ್ರೀಮತೀ ಚಂದ್ರಾವತಿಯವರು ಮಕ್ಕಳಿಗೆ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶ್ರೀ ಗಣೇಶ್ ರಾವ್, ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತೀ ಮಮತ ಉಪಸ್ಥಿತರಿದ್ದರು.





Thursday 21 July 2016

ಚಾಂದ್ರ ದಿನಾಚರಣೆ

                       ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಂದ್ರ ದಿನವನ್ನು ಆಚರಿಸಲಾಯಿತು. ಆ ಪ್ರಯುಕ್ತ ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಅಧ್ಯಾಪಕ ಶ್ರೀ ಜಯಪ್ರಶಾಂತ್  ಯವರು ಮಕ್ಕಳಿಗೆ ಚಾಂದ್ರಯಾನದ ಅಣುಕು ಯಾತ್ರೆಯ ಅನುಭವವನ್ನು ನೀಡುವ ಮೂಲಕ ಹೊಸ ಅನುಭವವನ್ನು ನೀಡಿದರು. ಬಳಿಕ ಶ್ರೀಮತಿ ಸೌಮ್ಯ ರವರು ರಸಪ್ರಶ್ನೆಯನ್ನು ನಡೆಸಿಕೊಟ್ಟರು. ವೀಜೇತರಿಗೆ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್ ರವರು ಬಹುಮಾನವನ್ನು ವಿತರಿಸಿದರು.







Friday 15 July 2016

ತರಕಾರಿ ತೋಟ ನಿರ್ಮಾಣ

         ಶಾಲೆಯಲ್ಲಿ ತರಕಾರಿ ತೋಟದ ನಿರ್ಮಾಣಕ್ಕಾಗಿ ವಿವಿಧ ತರಕಾರಿ ಬೀಜಗಳನ್ನು ಬಿತ್ತುವ ಮೂಲಕ ಚಾಲನೆ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್, ಅಧ್ಯಾಪಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ, ಶ್ರೀಮತಿ ಸೌಮ್ಯ ಪಿ, ಶ್ರೀ ರಘುನಾಥ್ ಕೆ, ಕುಮಾರಿ ಶ್ವೇತ ಕುಳೂರು ಉಪಸ್ಥಿತರಿದ್ದು ಬೀಜ ಬಿತ್ತನೆ ಕಾರ್ಯದಲ್ಲಿ ಮಕ್ಕಳೊಂದಿಗೆ ಸಹಕರಿಸಿದರು.






Thursday 7 July 2016

ಶಾಲಾ ನಾಯಕನ ಆಯ್ಕೆ

             ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ನಾಯಕನ ಆಯ್ಕೆಯನ್ನು ಮಕ್ಕಳ ಶಾಲಾ ಚುನಾವಣೆಯನ್ನು ನಡೆಸುವ ಮೂಲಕ ಪ್ರಜಾಪ್ರಭುತ್ವ ರೀತಿಯ ಆಡಳಿತವನ್ನು ಪರಿಚಯಿಸಲಾಯಿತು. ಚುನಾವಣೆಯ ಮುನ್ನಾ ದಿನ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ನಾಮಪತ್ರವನ್ನು ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್ ರವರಿಗೆ ಸಲ್ಲಿಸಿದರು. ಮರುದಿನ ನಡೆದ ಚುನಾವಣೆಯಲ್ಲಿ ಮತದಾರರು ಸರದಿ ಸಾಲಿನಲ್ಲಿ ಬಂದು ಚುನಾವಣಾ ಗುರುತನ್ನು ಕೈ ಬೆರಳಿಗೆ ಹಾಕಿಸಿ ತಮ್ಮ ನೆಚ್ಚಿನ ಅಭ್ಯರ್ಥಿಗೆ ಗುಪ್ತ ಮತದಾನದ ಮೂಲಕ ಮತ ಚಲಾಯಿಸಿದರು. ಚುನಾವಣೆಯ ಎಲ್ಲಾ ಪ್ರಕ್ರಿಯೆಯನ್ನು ಶಾಲಾ ಮಕ್ಕಳೇ ನಿರ್ವಹಿಸಿದ್ದು ವಿಶೇಷವಾಗಿತ್ತು. ಬಳಿಕ ಮುಖ್ಯ ಚುನಾವಣಾಧಿಕಾರಿಯ ನೇತೃತ್ವದಲ್ಲಿ ಮತ ಎಣಿಕೆ ನಡೆಯಿತು. ಬಳಿಕ ಫಲಿತಾಂಶ ಘೋಷಣೆ ಆಗುತ್ತಿದ್ದಂತೆ ವಿಜೇತ ಅಭ್ಯರ್ಥಿಯ ಬೆಂಬಲಿಗರ ಉದ್ಘೋಷ ಮುಗಿಲು ಮುಟ್ಟಿತ್ತು. ವಿಜಯ ಯಾತ್ರೆಯನ್ನು ನಡೆಸುವ ಮೂಲಕ ಸಂಭ್ರಮಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಬೆಂಬಲಿಗರು ನಾಯಕನಾಗಿ ಆಯ್ಕೆಯಾದ ಜಿತಿನ್ ಕುಮಾರ್ ಹಾಗೂ ಉಪನಾಯಕಿಯಾಗಿ ಆಯ್ಕೆಯಾದ ಕುಮಾರಿ ಹರ್ಷಿತ ರವರಿಗೆ ಮಾಲೆ ಹಾಕಿ ಹೂಗುಚ್ಛ ನೀಡುವುದರ ಮೂಲಕ ಅಭಿನಂದಿಸಿದರು. ಬಳಿಕ ಆಯ್ಕೆಯಾದ ಅಭ್ಯರ್ಥಿಗಳ ಪ್ರಮಾಣ ವಚನವನ್ನು ಮುಖ್ಯೋಪಾಧ್ಯಾಯರು ಬೋಧಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಸಹಕರಿಸಿದರು.

















Friday 1 July 2016

ಶಾಲಾ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

                 ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2016-17 ನೇ ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳೆದ ಶೈಕ್ಷಣಿಕ ವರ್ಷದ ಪಿ.ಟಿ.ಎ ಅಧ್ಯಕ್ಷ ಶ್ರೀ ಹರಿರಾಮ್ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್ ವಾರ್ಷಿಕ ವರದಿಯನ್ನು ಮಂಡಿಸಿದರು. ಮುಖ್ಯ ಅತಿಥಿಯಾಗಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ಹಾಗೂ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಶಶಿಕಲಾರವರು ಉಪಸ್ಥಿತರಿದ್ದರು. ನೂತನ ಪಿ.ಟಿ.ಎ ಅಧ್ಯಕ್ಷೆಯಾಗಿ ಶ್ರೀಮತಿ ಸೌಮ್ಯಲತಾ, ಉಪಾಧ್ಯಕ್ಷೆಯಾಗಿ ಶ್ರೀಮತಿ ಸುರೇಖರವರು ಅವಿರೋಧವಾಗಿ ಆಯ್ಕೆಯಾದರು. ಮಾತೃ ಸಂಘದ ಅಧ್ಯಕ್ಷೆಯಾಗಿ ಶ್ರೀಮತಿ ಮಮತ, ಉಪಾಧ್ಯಕ್ಷೆಯಾಗಿ ಶ್ರೀಮತಿ ಸುಲೋಚನ ರವರು ಅವಿರೋಧವಾಗಿ ಆಯ್ಕೆಯಾದರು. ಶಾಲಾ ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ವಂದಿಸಿದರು.