FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 31 August 2017

ಓಣಂ ಆಚರಣೆ:

                 ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓಣಂ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
                  ಆ ಪ್ರಯುಕ್ತ ಆಕರ್ಷಕ ಹೂವಿನ ರಂಗೋಲಿಯನ್ನು ಬಿಡಿಸಲಾಯಿತು. ಶಾಲಾ ವಿದ್ಯಾರ್ಥಿ ಶ್ರೇಣಿಕ್ ಕರ್ಕೇರ ಹಾಕಿದ ಮಹಾಬಲಿಯ ವೇಷ ಎಲ್ಲರ ಗಮನ ಸೆಳೆಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು. ಶಾಲಾ ಪಿ.ಟಿ.ಎ ಅಧ್ಯಕ್ಷರಾದ ಪ್ರಮೋದ್ ಶೆಟ್ಟಿ ಶಾಲೆದಪಡ್ಪು, ಮಾತೃ ಸಂಘದ ಅಧ್ಯಕ್ಷೆಯಾದ ಆಶಾಲತಾ ಕುಳೂರು, ಉಪಾಧ್ಯಕ್ಷೆ ಸೌಮ್ಯಲತಾ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಉಷಾ ಪೂಂಜ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಉಪಕಾರ್ಯದರ್ಶಿ ವಸಂತ ಪೂಜಾರಿ ಕುಳೂರು, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಸದಾಶಿವ ಸೇನವ ಕುಳೂರು, ರಘುನಾಥ ಕುಳೂರು, ಶಶಿ ಕುಮಾರ್ ಕುಳೂರು, ಅಧ್ಯಾಪಕ ವೃಂದ ಹಾಗೂ ಪಿ.ಟಿ.ಎ ಸದಸ್ಯರು ಉಪಸ್ಥಿತರಿದ್ದರು. ಮಧ್ಯಾಹ್ನ ವಿಶೇಷ ಓಣಂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಬಳಿಕ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಮನೋರಂಜನಾ ಆಟಗಳನ್ನು ಏರ್ಪಡಿಸಲಾಯಿತು.











Thursday 17 August 2017

ಶಾಲೋದ್ಯಾನಕ್ಕೆ ಮಣ್ಣು ತುಂಬಿಸುವುದು.

ಶಾಲಾ ಶಿಕ್ಷಕ ವೃಂದದವರು ಶಾಲೋದ್ಯಾನಕ್ಕೆ ಮಣ್ಣು ಹಾಕಿ ಸುಂದರಗೊಳಿಸಿದರು.




Tuesday 15 August 2017

ವಾರ್ಡ್ ಮಟ್ಟದ ಹಸಿರು ಕೇರಳ ಪದ್ಧತಿ ಕಾರ್ಯಕ್ರಮ

               ಮೀಂಜ ಪಂಚಾಯತ್ ಮಟ್ಟದ ಕೇರಳ ಸರಕಾರದ ಹಸಿರು ಕೇರಳ ಕರ್ಮ ಪದ್ಧತಿಯ ಹಸಿರು ಕೇರಳ ಮಿಷನ್ ಕಾರ್ಯಕ್ರಮದಂಗವಾಗಿ ಮಾಲಿನ್ಯದಿಂದ ಸ್ವಾತಂತ್ರ್ಯ- ಸಮಗ್ರ ಶುಚಿತ್ವ ಪದ್ಧತಿಯಂಗವಾಗಿ ವಾರ್ಡ್ ಮಟ್ಟದ ಶುಚಿತ್ವ ಸಂಗಮವು ನಮ್ಮ ಕುಳೂರು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಂಚಾಯತ್ ಪ್ರತಿನಿಧಿಯಾದ ಅಬ್ದುಲ್ ಸಮದ್, ಪಂಚಾಯತ್ ಯೂತ್ ಕೋ-ಓರ್ಡಿನೇಟರ್ ಶ್ರೀ ಇಬ್ರಾಹಿಂ ಹೊನ್ನಕಟ್ಟೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಕಂಚಿಲ, ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಆಶಾಲತಾ ಕುಳೂರು, ಉದ್ಯಮಿ ಶ್ರೀ ಪಿ.ಆರ್.ಶೆಟ್ಟಿ, ಶ್ರೀ ನಾರಾಯಣ ನೈಕ್ ನಡುಹಿತ್ಲು, ಮಾಜಿ ವಾರ್ಡ್ ಸದಸ್ಯ ಶ್ರೀ ಬಾಲಪ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದಂಗವಾಗಿ ಸಂದೇಶವನ್ನು ವಾರ್ಡ್ ಸದಸ್ಯೆ ಓದಿದರು. ಕತ್ತಲೆಯಿಂದ ಬೆಳಗಿನೆಡೆಗೆ ಎಂಬಂತೆ ಅತಿಥಿಗಳು ಕ್ಯಾಂಡಲನ್ನು ಉರಿಸಿದರು.





ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

                 ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 71 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
                 ಆ ಪ್ರಯುಕ್ತ ಶಾಲಾ ಮಕ್ಕಳಿಂದ ಆಕರ್ಷಕ ಮೆರವಣಿಗೆಯು ನಡೆಯಿತು. ಮೆರವಣಿಗೆಯಲ್ಲಿ ಮಕ್ಕಳು ಹಾಕಿದ ಸ್ವಾತಂತ್ರ್ಯ ಹೋರಾಟಗಾರರ ವೇಷವು ಎಲ್ಲರ ಗಮನ ಸೆಳೆಯಿತು. ಬಳಿಕ ನಡೆದ ಧ್ವಜಾರೋಹಣವನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ರವರು ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ, ಉದ್ಯಮಿ ಶ್ರೀ ಪಿ.ಆರ್.ಶೆಟ್ಟಿ ಪೊಯ್ಯೆಲ್, ಶಾಲಾ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಆಶಾಲತಾ ಕುಳೂರು, ಶ್ರೀ ನಾರಾಯಣ ನೈಕ್ ನಡುಹಿತ್ಲು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಮೊಹಮ್ಮದ್ ಕಂಚಿಲ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ಹರಿರಾಮ ಕುಳೂರು ವಂದಿಸಿದರು. ಶಾಲಾ ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಜರಗಿದವು. ವಿವಿಧ ಸಂಘ ಸಂಸ್ಥೆಗಳು, ವಿದ್ಯಾಭಿಮಾನಿಗಳು ಸಿಹಿತಿಂಡಿಗಳ ವ್ಯವಸ್ಥೆಯನ್ನು ಮಾಡಿದ್ದರು. ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

 





















Monday 14 August 2017

ಕೊಳಕ್ಕೆ ನೈದಿಲೆ ಹಾಗೂ ತಾವರೆ ಗಿಡ

           ಶಾಲಾ ಉದ್ಯಾನದಲ್ಲಿರುವ ನೀರಿನ ಕೊಳಕ್ಕೆ ನೈದಿಲೆ ಹಾಗೂ ತಾವರೆ ಹೂವಿನ ಗಿಡವನ್ನು ಹಾಕಲಾಯಿತು.




Sunday 6 August 2017

ಶ್ರಮದಾನ ಹಾಗೂ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ

                 ತಾ. 06-08-2017 ರಂದು ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲೋದ್ಯಾನದಲ್ಲಿ ಶ್ರಮದಾನ ಹಾಗೂ ಜಂಪಿಂಗ್ ಪಿಟ್ ನಿರ್ಮಾಣ ಕಾರ್ಯ ನಡೆಯಿತು. ಶಾಲಾ ಪಿ.ಟಿ.ಎ ಅಧ್ಯಕ್ಷರಾದ ಶ್ರೀ ಪ್ರಮೋದ್ ಕುಮಾರ್ ಶಾಲೆದಪಡ್ಪು ರವರ ವತಿಯಿಂದ ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ಸಂಜೆ ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಕಾರ್ಯಕ್ರಮದ ಆಯೋಜನೆಗೆ ಹಳೆ ವಿದ್ಯಾರ್ಥಿಗಳ ಹಾಗೂ ಪಿ.ಟಿ.ಎ ಸದಸ್ಯರ ಸಭೆಯನ್ನು ಕರೆಯಲಾಯಿತು. ಈ ಸಭೆಯಲ್ಲಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಕಂಚಿಲ, ಪಿ.ಟಿ.ಎ ಅಧ್ಯಕ್ಷರಾದ ಶ್ರೀ ಪ್ರಮೋದ್ ಶೆಟ್ಟಿ ಶಾಲೆದಪಡ್ಪು, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಪ್ರಧಾನ ಕಾರ್ಯದರ್ಶಿ ಶ್ರೀ ಹರಿರಾಮ ಕುಳೂರು ಹಾಗೂ ಅನೇಕ ಹಳೆ ವಿದ್ಯಾರ್ಥಿಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಿದರು.