FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 28 September 2017

ದಸರಾ ಆಚರಣೆ:

               ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ ಆಚರಣೆಯನ್ನು ಆಚರಿಸಲಾಯಿತು.
ಆ ಪ್ರಯುಕ್ತ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳು ಹಾಗೂ ಮನೋರಂಜನಾ ಆಟಗಳನ್ನು ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ, ಮಧೂರು ಶಾಲೆಯ ಮುಖ್ಯೋಪಾಧ್ಯಾಯರಾದ ವಿನೋದ್ ಕುಮಾರ್ ಬಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹರಿರಾಮ ಕುಳೂರು, ಶಾಲಾ ಮಾತೃ ಮಂಡಳಿ ಅಧ್ಯಕ್ಷೆ ಆಶಾಲತಾ ಕುಳೂರು, ಉಪಾಧ್ಯಕ್ಷೆ ಸೌಮ್ಯಲತಾ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಸುಬ್ರಾಯ ಆಚಾರ್ಯ, ಜಯರಾಜ್ ಶೆಟ್ಟಿ ಚಾರ್ಲ, ಜನಾರ್ದನ ಪೂಜಾರಿ, ಶಶಿಕುಮಾರ್ ಕುಳೂರು, ರಘುನಾಥ ಕೆ, ಅಧ್ಯಾಪಿಕೆಯರಾದ ಶ್ವೇತಾ, ರೇಶ್ಮಾ, ಶಾಲಾ ಪಿ.ಟಿ.ಎ ಹಾಗೂ ಮಾತೃ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ಸ್ವಾಗತಿಸಿ, ಸೌಮ್ಯ ಪಿ ವಂದಿಸಿದರು. ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಡೆಸಿಕೊಟ್ಟರು.




Tuesday 5 September 2017

ನಮ್ಮ ಶಾಲೆಗೆ 'ಉತ್ತಮ ರಕ್ಷಕ-ಶಿಕ್ಷಕ ಸಂಘ' ಪ್ರಶಸ್ತಿ

               ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಕ್ಷಕ-ಶಿಕ್ಷಕ ಸಂಘಕ್ಕೆ 2016-17 ನೇ ಸಾಲಿನ ಮಂಜೇಶ್ವರ ಉಪಜಿಲ್ಲಾ ಮಟ್ಟದ 'ಉತ್ತಮ ರಕ್ಷಕ-ಶಿಕ್ಷಕ ಸಂಘ ಪ್ರಶಸ್ತಿ'ಯು ದೊರತಿದ್ದು ಇದನ್ನು ಕಾಸರಗೋಡು ಶಾಸಕರಾದ ಎನ್.ಎ ನೆಲ್ಲಿಕುನ್ನು ಅವರು ಸರಕಾರಿ ಪ್ರೌಢಶಾಲೆ ಕುಂಬ್ಳೆಯಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಂದು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ, ಮಾತೃ ಸಂಘದ ಉಪಾಧ್ಯಕ್ಷೆ ಸೌಮ್ಯಲತಾ, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಪ್ರಧಾನ ಕಾರ್ಯದರ್ಶಿ ಹರಿರಾಮ ಕುಳೂರು, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಉಪಸ್ಥಿತರಿದ್ದು ಪ್ರಶಸ್ತಿ ಸ್ವೀಕರಿಸಿದರು. ಶಾಲಾ ಮಾತೃ ಸಂಘ, ಹಳೆ ವಿದ್ಯಾರ್ಥಿ ಸಂಘ, ಶಾಲಾ ಅಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಉತ್ತಮ ರಕ್ಷಕ-ಶಿಕ್ಷಕ ಸಂಘ ಪ್ರಶಸ್ತಿ  ಪಡೆದ ಪಿ.ಟಿ.ಎ ಗೆ ಅಭಿನಂದನೆ ಸಲ್ಲಿಸಿದ್ದಾರೆ.