FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday 26 January 2018

ಸಂಭ್ರಮದ 69ನೇ ಗಣರಾಜ್ಯೋತ್ಸವ ಆಚರಣೆ:

                  ನಮ್ಮ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 69 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
                  ಆ ಪ್ರಯುಕ್ತ ನಡೆದ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ದೇಶವು ಜಾನಾಧಿಪತ್ಯ ಆಡಳಿತವನ್ನು ಕಾಣಲು ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಎಂಬಂತೆ ಪ್ರಜಾಪ್ರಭುತ್ವದ ಆಡಳಿತದಲ್ಲಿರುವುದೇ ನಮ್ಮ ಸೌಭಾಗ್ಯ. ಇದನ್ನು ನಾವೆಲ್ಲರೂ ಕಾಪಾಡಿಕೊಂಡು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು. ಶಾಲೆಯ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಕುಮಾರ್ ಶಾಲೆದಪಡ್ಪು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷರಾದ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಕೃಷ್ಣವೇಣಿ ಕುಳೂರು, ಗೌರವ ಸಲಹೆಗಾರರಾದ ನಾರಾಯಣ ನೈಕ್ ನಡುಹಿತ್ಲು, ಸದಸ್ಯರಾದ ಸುಬ್ರಾಯ ಆಚಾರ್ಯ ಕುಳೂರು, ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಕುಮಾರಿ ಶ್ವೇತ ಕುಳೂರು, ಜಲಜ ಪೊಯ್ಯೆಲ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಾಲಾ ಅಧ್ಯಾಪಿಕೆ ಸೌಮ್ಯ ಪಿ ವಂದಿಸಿದರು. ಬಳಿಕ ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.







No comments:

Post a Comment