FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday 28 January 2018

ಉಚಿತ ವೈದ್ಯಕೀಯ ಶಿಬಿರ:

          ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈಲ್ಯಾಂಡ್ ಆಸ್ಪತ್ರೆ ಮಂಗಳೂರು, ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ನಡೆಯಿತು.
         ವೈದ್ಯಕೀಯ ಶಿಬಿರದ ಉದ್ಘಾಟನೆಯನ್ನು ಸಂತಡ್ಕ ಶ್ರೀ ಅರಸು ಸಂಕಲ ದೈವಸ್ಥಾನದ ಅಧ್ಯಕ್ಷರಾದ ಡಾ| ಶ್ರೀಧರ ಭಟ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಡಾ| ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ, ಹೈಲ್ಯಾಂಡ್ ಆಸ್ಪತ್ರೆಯ ನಿರ್ದೇಶಕರಾದ ಡಾ| ಅಬ್ದುಲ್ಲಾ ಯಾಸಿರ್, ಸಿ.ಇ.ಒ ಮೊಹಮ್ಮದ್ ಯೂನಸ್, ವೈದ್ಯರುಗಳಾದ ಡಾ| ಅಹ್ಮದ್ ರಿಝ್ವಾನ್, ಡಾ| ಶಿಹಾಬ್ ಹಸನ್, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ, ಶಾಲಾ ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಅಭಿಜಿತ್ ಶೆಟ್ಟಿ ಕೊಂಡಾಣರವರು ಸ್ವಾಗತಿಸಿ, ಜತೆ ಕಾರ್ಯದರ್ಶಿ ವಸಂತ ಪೂಜಾರಿ ವಂದಿಸಿದರು. ಬಳಿಕ ಹಲ್ಲು, ಎಲುಬು, ಹೃದಯ, ಮಧುಮೇಹ, ಕಣ್ಣು, ಮೂಗು, ಗಂಟಲು ಹಾಗೂ ಜನರಲ್ ವಿಭಾಗಗಳಲ್ಲಿ ನುರಿತ ತಜ್ಞರಿಂದ ತಪಾಸಣೆ ನಡೆಸಲಾಯಿತು.

















No comments:

Post a Comment