FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 5 June 2017

ಪರಿಸರ ದಿನಾಚರಣೆ

                ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಆ ಪ್ರಯುಕ್ತ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್ ರವರು ಶಾಲಾ ಉದ್ಯಾನದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ವಿನೋದ್ ಕುಮಾರ್ ಬಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಕಾರ್ಯದರ್ಶಿ ಶ್ರೀ ವಸಂತ ಪೂಜಾರಿ ಕುಳೂರು, ಸದಸ್ಯರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಶ್ರೀ ರಘುನಾಥ ಕುಳೂರು, ಶಶಿಕುಮಾರ್ ಕುಳೂರು, ಶಿವರಾಜ್ ಕುಳೂರು, ವಿಶ್ವರಾಜ್ ಕುಳೂರು, ಶಾಲಾ ಅಧ್ಯಾಪಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ, ಶ್ರೀಮತಿ ಸೌಮ್ಯ ಪಿ, ಕುಮಾರಿ ಶ್ವೇತ, ಶ್ರೀಮತಿ ಜಲಜ ಉಪಸ್ಥಿತರಿದ್ದರು. ಬಳಿಕ ಹಳೆ ವಿದ್ಯಾರ್ಥಿ ಸಂಘದವರು ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಟ್ಟರು. ಬಳಿಕ ಶಾಲಾ ಮಕ್ಕಳಿಂದ ಆಕರ್ಷಕ ಪರಿಸರ ಸ್ನೇಹೀ ಮೆರವಣಿಗೆ ನಡೆಯಿತು. ಮಕ್ಕಳು ಪರಿಸರ ರಕ್ಷಣೆಯ ಕುರಿತು ಘೋಷಣೆಗಳನ್ನು ಕೂಗುತ್ತಾ ಜಾಗೃತಿ ಮೂಡಿಸಿದರು.









No comments:

Post a Comment