FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday 23 June 2017

ಶಾಲಾ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

        ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2017-18 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ನಡೆಯಿತು.
         ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ, ಮಾತೃ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಲೋಚನ ಉಪಸ್ಥಿತರಿದ್ದರು. ಶಾಲಾ ಅಧ್ಯಾಪಿಕೆ ಶ್ರೀಮತಿ ಸೌಮ್ಯ ಪಿ ಕಳೆದ ಶೈಕ್ಷಣಿಕ ವರ್ಷದ ಶಾಲಾ ವರದಿಯನ್ನು ಮಂಡಿಸಿದರು. ಬಳಿಕ ಈ ವರ್ಷದ ನೂತನ ರಕ್ಷಕ-ಶಿಕ್ಷಕ ಸಂಘ ಹಾಗೂ ಮಾತೃ ಮಂಡಳಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ಹಾಗೂ ಉಪಾಧ್ಯಕ್ಷರಾಗಿ ಶ್ರೀ ಉಮೇಶ್ ಕುಳೂರು ರವರು ಅವಿರೋಧವಾಗಿ ಆಯ್ಕೆಯಾದರು. ಸದಸ್ಯರಾಗಿ ಸೌಮ್ಯಲತಾ, ಸುಲೋಚನ, ರಘುನಾಥ್, ಆಶಾಲತಾ, ಸುನೀತಾ, ಯಶೋಧ ಕುಳೂರು, ಮೀನಾಕ್ಷಿ, ಶೋಭಾ, ಲಲಿತ, ಕಮಲಾಕ್ಷಿ ಹಾಗೂ ಯಶೋಧ ಪೊಯ್ಯೆಲ್ ಆಯ್ಕೆಯಾದರು.
          ಮಾತೃ ಮಂಡಳಿಯ ಅಧ್ಯಕ್ಷೆಯಾಗಿ ಶ್ರೀಮತಿ ಆಶಾಲತಾ ಕುಳೂರು ಹಾಗೂ ಉಪಾಧ್ಯಕ್ಷೆಯಾಗಿ ಶ್ರೀಮತಿ ಸೌಮ್ಯಲತಾ ಕುಳಿಂಜ ಅವಿರೋಧವಾಗಿ ಆಯ್ಕೆಯಾದರು. ಸದಸ್ಯೆರಾಗಿ ಸುಲೋಚನಾ, ಮೀನಾಕ್ಷಿ, ಯಶೋಧ ಕುಳೂರು, ಕುಸುಮ, ರೇಷ್ಮ, ಬೇಬಿ, ಸುರೇಖ, ಕಮಲಾಕ್ಷಿ, ಶೋಭಾ, ಯಶೋಧ ಪೊಯ್ಯೆಲ್, ಲಲಿತ ಹಾಗೂ ಸುನಿತಾ ರವರು ಆಯ್ಕೆಯಾದರು.
            ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ ರವರು ಸ್ವಾಗತಿಸಿದರು. ಶಾಲಾ ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.



No comments:

Post a Comment