FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday 23 June 2017

ವಾಚನಾ ಸಪ್ತಾಹದ ಸಮಾರೋಪ

                  ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ಸಪ್ತಾಹದ ಸಮಾರೋಪ ಸಮಾರಂಭ ಸಡೆಯಿತು.
                   ಆ ಪ್ರಯುಕ್ತ ನಡೆದ ಕಾರ್ಯಕ್ರಮವನ್ನು ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ.ಪಿ ರವರು ಉದ್ಘಾಟಿಸಿ ಮಾತನಾಡುತ್ತಾ 'ಕೇರಳದಲ್ಲಿ ಗ್ರಂಥಾಲಯಗಳ ಸೃಷ್ಟಿಕರ್ತನೆಂದೇ ಕರೆಯಲ್ಪಡುವ ಪಿ.ಯನ್ ಪಣಿಕ್ಕರ್ ರವರು ಕೇರಳದಲ್ಲಿ ಮಾಡಿದ ಸಾಧನೆಗೆ ಸಾವಿರಾರು ಗ್ರಂಥಾಲಯಗಳೇ ಸಾಕ್ಷಿಗಳಾಗಿವೆ' ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಸೌಮ್ಯಲತಾ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತ್ಯನಾರಾಯಣ ಶರ್ಮಾ ರವರು ಮಾತನಾಡಿ 'ಮಕ್ಕಳಲ್ಲಿ ಓದಿನ ಹವ್ಯಾಸಗಳು ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಅವರಲ್ಲಿ ಓದಿನ ಕುರಿತಾಗಿ ಹೆಚ್ಚಿನ ಆಸಕ್ತಿಯನ್ನು ಹುಟ್ಟು ಹಾಕಲು ವಾಚನಾ ಸಪ್ತಾಹದಲ್ಲಿ ನಡೆಸಿದ ವಿವಿಧ ಚಟುವಟಿಕೆಗಳು ಸಹಕಾರಿಯಾಗಿದೆ. ಹಾಗಾಗಿ ಇದನ್ನು ಇನ್ನೂ ಮುಂದುವರಿಸಲು ಈ ವರ್ಷ ಪಕ್ಷಾಚರಣೆಯಾಗಿ ಆಚರಿಸಲಾಗುತ್ತಿದೆ' ಎಂದರು. ಇದೇ ಸಂದರ್ಭದಲ್ಲಿ ವಾಚನಾ ಸಪ್ತಾಹದ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು. ಶಾಲಾ ಅಧ್ಯಾಪಿಕೆ ಶ್ರೀಮತಿ ಸೌಮ್ಯ ಪಿ ಸ್ವಾಗತಿಸಿ, ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.








No comments:

Post a Comment