FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Friday 15 June 2018

ಕನ್ನಡ ಕಂದನ ಸಿರಿಚಂದನ ಗಿಡ

          ಸಿರಿ ಚಂದನ ಕನ್ನಡ ಯುವ ಬಳಗ ಕಾಸರಗೋಡು ಇವರ ನೇತೃತ್ವದಲ್ಲಿ ಪರಿಸರ ದಿನಾಚರಣೆಯ ಭಾಗವಾಗಿ 'ಕನ್ನಡ ಕಂದನ ಸಿರಿಚಂದನ ಗಿಡ' ಎನ್ನುವ ವಿನೂತನ ಕಾರ್ಯಕ್ರಮ ನಮ್ಮ ಕುಳೂರು ಶಾಲಾ ವಿದ್ಯಾರ್ಥಿನಿ ಕುಮಾರಿ ಸಾನ್ವಿಕಳ ಮನೆಯಲ್ಲಿ ನಡೆಯಿತು. ಇದರಂಗವಾಗಿ ಸಾನ್ವಿಕ ತನ್ನ ಮನೆ ಪರಿಸರದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ರಕ್ಷಣೆಗೆ ಮುಂದಡಿ ಇಟ್ಟಳು. ಈ ಸಂದರ್ಭದಲ್ಲಿ ಸಿರಿ ಚಂದನ ಕನ್ನಡ ಯುವ ಬಳಗ ಕಾಸರಗೋಡು ಇವರ ರೂವಾರಿ, ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕ ಶ್ರೀ ರತ್ನಾಕರ ಮಲ್ಲಮೂಲೆ, ವಾರ್ಡ್ ಸದಸ್ಯೆ ಶ್ರೀಮತಿ ಚಂದ್ರಾವತಿ ವಿ. ಪಿ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಜಯರಾಜ್ ಶೆಟ್ಟಿ ಚಾರ್ಲ, ಸಿರಿ ಚಂದನ ಕನ್ನಡ ಯುವ ಬಳಗದ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.





No comments:

Post a Comment