FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 2 October 2019

ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ

        ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 115 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
        ಆ ಪ್ರಯುಕ್ತ ವಿಶೇಷ ಅಸೆಂಬ್ಲಿ ನಡೆಸಿ ಗೌರವ ವಂದನೆ ಸಲ್ಲಿಸಲಾಯಿತು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರಿಗೆ ಹಾಗೂ ಶಾಲಾ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿಕೊಟ್ಟರು. ರಸಪ್ರಶ್ನೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಸುಪ್ರೀತ ಕುಳೂರು ಹೊಸಮನೆ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ ಉಪಸ್ಥಿತರಿದ್ದು ಶುಭ ಕೋರಿದರು. ಬಳಿಕ ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶಾಲಾ ಪರಿಸರದ ಶುಚಿತ್ವ ಕಾರ್ಯಕ್ರಮ ನಡೆಯಿತು. ಶಾಲಾ ರಕ್ಷಕ-ಶಿಕ್ಷಕ  ಸಂಘದ ಸದಸ್ಯ ಜಯರಾಮ್ ರೈ ಎಲಿಯಾಣ (ಮಾಲಕರು, ಶ್ರೀ ದುರ್ಗಾ ಜನರಲ್ ಸ್ಟೋರ್, ಚಿಗುರುಪಾದೆ) ರವರು ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಿದರು.











No comments:

Post a Comment