FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday 29 December 2019

ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಸಭೆ

        ಶಾಲಾ ವಾರ್ಷಿಕೋತ್ಸವದ ಅಂತಿಮ ತೀರ್ಮಾನವನ್ನು ಕೈಗೊಳ್ಳಲು ಇಂದು (29-12-2019 ನೇ ಆದಿತ್ಯವಾರ) ಸಂಜೆ ಶಾಲಾ ಹಳೆ ವಿದ್ಯಾರ್ಥಿಗಳ, ಶಾಲಾ ರಕ್ಷಕರ, ವಿದ್ಯಾಭಿಮಾನಿಗಳ ಸಭೆಯನ್ನು ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಕರೆಯಲಾಯಿತು. ಸಭೆಯ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲರವರು ವಹಿಸಿದ್ದರು. ಸಭೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ, ಹಳೆ ವಿದ್ಯಾರ್ಥಿ ಸಂಘದ ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಶಾಲಾ ಶಿಕ್ಷಕರ ಭಾಗವಹಿಸಿದ್ದರು. ಸಭೆಯಲ್ಲಿ ವಾರ್ಷಿಕೋತ್ಸವದ ವಿವಿಧ ಕಾರ್ಯಕ್ರಮಗಳನ್ನು ತೀರ್ಮಾನಿಸಿ, ಪ್ರಾಯೋಜಕರನ್ನು ಕಂಡುಕೊಳ್ಳಲಾಯಿತು. ಕಾರ್ಯಕ್ರಮದ ಅತಿಥಿಗಳ ಪಟ್ಟಿಯನ್ನು ಮಾಡಲಾಯಿತು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಸ್ವಾಗತಿಸಿ, ಅಧ್ಯಾಪಕಿ ಸೌಮ್ಯ ಪಿ ವಂದಿಸಿದರು.









Friday 20 December 2019

ಹಳೆ ವಿದ್ಯಾರ್ಥಿ ಸಂಘದ ಸಭೆ

          ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ತೀರ್ಮಾನವನ್ನು ಕೈಗೊಳ್ಳಲು 20-12-2019 ನೇ ಶುಕ್ರವಾರದಂದು ಹಳೆ ವಿದ್ಯಾರ್ಥಿ ಸಂಘದ ಸಭೆಯನ್ನು ಸೇರಲಾಯಿತು. ಸಭೆಯ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲ ವಹಿಸಿದ್ದರು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. 2020 ಫೆಬ್ರವರಿ 8 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುವ ತೀರ್ಮಾನಕ್ಕೆ ಬರಲಾಯಿತು. ಕಾರ್ಯಕ್ರಮಗಳ ರೂಪುರೇಷೆಗಳನ್ನು ತೀರ್ಮಾನಿಸಲು ತಾ. 29-12-2019 ನೇ ಆದಿತ್ಯವಾರದಂದು ಅಪರಾಹ್ನ ಗಂಟೆ 02:30 ಕ್ಕೆ ಸರಿಯಾಗಿ ಹಳೆ ವಿದ್ಯಾರ್ಥಿಗಳ, ಶಾಲಾ ಮಕ್ಕಳ ರಕ್ಷಕರ, ಊರ ಹಾಗೂ ಪರವೂರ ವಿದ್ಯಾಭಿಮಾನಿಗಳ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಜಂಟೀ ಸಭೆಯನ್ನು ಕರೆಯಲು ತೀರ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು ಸ್ವಾಗತಿಸಿ, ಜಯರಾಜ್ ಶೆಟ್ಟಿ ಚಾರ್ಲ ವಂದಿಸಿದರು.



ಶಾಲಾ ರಕ್ಷಕ-ಶಿಕ್ಷಕ ಸಂಘದ ಸಭೆ

       ತಾ. 20-12--2019 ನೇ ಶುಕ್ರವಾರದಂದು ಶಾಲಾ ರಕ್ಷಕ-ಶಿಕ್ಷಕ ಸಂಘದ ಸಭೆಯನ್ನು ನಡೆಸಲಾಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಅಧ್ಯಕ್ಷತೆ ವಹಿಸಿದ್ದರು. ಮಾತೃ ಪಿ. ಟಿ. ಎ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳಗುತ್ತು, ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಉಪಸ್ಥಿತರಿದ್ದರು. ಶಾಲಾ ವಾರ್ಷಿಕೋತ್ಸವ, ದ್ವಿತೀಯ ಹಂತದ ಮೌಲ್ಯಮಾಪನ ಇವೇ ಮೊದಲಾದ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಶಾಲಾ ಅಧ್ಯಾಪಿಕೆ ಸೌಮ್ಯ ಪಿ ಸ್ವಾಗತಿಸಿ, ಅಧ್ಯಾಪಿಕೆ ನಯನ ಎಂ ವಂದಿಸಿದರು ಬಳಿಕ ಕ್ಲಾಸ್ ಪಿ. ಟಿ. ಎ ನಡೆಸಿ ಮಕ್ಕಳ ದ್ವಿತೀಯ ಹಂತದ ಮೌಲ್ಯಮಾಪನದ ಕುರಿತು ಚರ್ಚಿಸಿ, ಮಕ್ಕಳ ಪ್ರಶ್ನೆ ಪತ್ರಿಕೆಯನ್ನು ಹೆತ್ತವರಿಗೆ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮರವರ ಮಗಳ ಮದುವೆಯ ಪ್ರಯುಕ್ತ ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.






'ಬುಲ್ ಬುಲ್' ಉದ್ಘಾಟನೆ

           ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ 'ಬುಲ್ ಬುಲ್' ವಿಭಾಗದ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು.
           ಶಾಲೆಯಲ್ಲಿ ನೂತನವಾಗಿ ಆರಂಭವಾದ ಬುಲ್ ಬುಲ್ ವಿಭಾಗಕ್ಕೆ ಮಕ್ಕಳನ್ನು ಬ್ಯಾಡ್ಜ್ ಹಾಗೂ ಸ್ಕಾರ್ಫ್ ಹಾಕುವ ಮೂಲಕ ಸೇರಿಸಿಕೊಳ್ಳಲಾಯಿತು. ಶಾಲಾ ಬುಲ್ ಬುಲ್ ಅಧ್ಯಾಪಿಕೆ ನಯನ ಯಂ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ. ಪಿ ಉದ್ಘಾಟಿಸಿ, 'ಮಕ್ಕಳಲ್ಲಿ ಶಿಸ್ತು, ಆತ್ಮಸ್ಥೈರ್ಯ ತುಂಬಲು ಬುಲ್ ಬುಲ್ ಸಹಕಾರಿಯಾಗುತ್ತದೆ' ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಗೈಡ್ ವಿಭಾಗದ ಜಿಲ್ಲಾ ಉಪ ಆಯುಕ್ತರು ಹಾಗೂ ಆನೆಕಲ್ಲು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಕುಮಾರಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಬ್ ಬುಲ್ ಬುಲ್ ವಿಭಾಗದ ಜಿಲ್ಲಾ ಸ್ಥಾನೀಯ ಆಯುಕ್ತರು, ಕೊಡ್ಲಮೊಗರು ವಾಣೀ ವಿಜಯ ಎ.ಯು. ಪಿ ಶಾಲಾ ಅಧ್ಯಾಪಿಕೆ ಜ್ಯೋತಿಲಕ್ಷ್ಮಿ, ಮಾತೃ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳಗುತ್ತು, ಶಾಲಾ ಬುಲ್ ಬುಲ್ ಅಧ್ಯಾಪಿಕೆ ನಯನ ಯಂ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ಬೆಂಕಿ ಅನಾಹುತಕ್ಕೆ ಮನೆಯು ಭಾಗಶಃ ಹಾನಿಗೀಡಾಗಿದ್ದು ಮನೆಯ ಕುಟುಂಬಕ್ಕೆ ಶಾಲಾ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಸಹಾಯ ನೀಡಲಾಯಿತು. ಗೈಡ್ ಶಿಕ್ಷಕಿ ಶ್ರೀಕುಮಾರಿ ಟೀಚರ್ ಮಕ್ಕಳಿಗೆ ಅಭಿನಯ ಗೀತೆಯನ್ನು ಹಾಡಿಸುವುದರ ಮೂಲಕ ಮನರಂಜಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ಎಲಿಯಾಣ ವಂದಿಸಿದರು. ಶಾಲಾ ಅಧ್ಯಾಪಿಕೆ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು.














ಸೂರ್ಯ ಗ್ರಹಣ ಮಾಹಿತಿ

         ಇದೇ ಬರುವ 26 ನೇ ತಾರೀಕಿನಂದು ಸಂಭವಿಸುವ ಕಂಕಣ ಸೂರ್ಯ ಗ್ರಹಣದ ಕುರಿತು ಮಕ್ಕಳಿಗೆ ಅರಿವನ್ನು ಮೂಡಿಸಲು ವಿಶೇಷ ಅಸೆಂಬ್ಲಿಯನ್ನು ಕರೆಯಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ಮಕ್ಕಳಿಗೆ ಗ್ರಹಣ ವೀಕ್ಷಣೆಯ ಕುರಿತು ಮಾಹಿತಿ ನೀಡಿದರು. ಬಳಿಕ ಸೂರ್ಯ ಗ್ರಹಣದ ವೀಡಿಯೋ ಪ್ರದರ್ಶನ ನಡೆಯಿತು.