FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday 18 July 2021

ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

              ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇವುಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. 

              ಮಕ್ಕಳನ್ನು ಕಲಿಕೆಯತ್ತ ಆಕರ್ಷಿಸುವ ಬಣ್ಣ ಬಣ್ಣದ ಚಿತ್ರಗಳನ್ನೊಳಗೊಂಡ ತರಗತಿ ಕೋಣೆಗಳ ಅನಾವರಣ, ಪ್ರೀ ಪ್ರೈಮರಿ ವಿಭಾಗದ ಮಕ್ಕಳಿಗೆ ಪಾಠ ಪುಸ್ತಕ ವಿತರಣೆ ಹಾಗೂ ಶಾಲೆಯ ಹಲವು ಅಭಿವೃದ್ಧಿ ಕಾರ್ಯಗಳಲ್ಲಿ ಮಹಾ ಪೋಷಕರಾಗಿ ಕೈ ಜೋಡಿಸಿದ ಶಾಲಾ ಹಳೆ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಇವೇ ಮೊದಲಾದ ಕಾರ್ಯಕ್ರಮಗಳು ನಡೆದುವು.

                ಬಣ್ಣ ಬಣ್ಣದ ಚಿತ್ರಗಳನ್ನೊಳಗೊಂಡ ತರಗತಿ ಕೋಣೆಗಳ ಅನಾವರಣವನ್ನು ಶಾಲಾ ಹಳೆ ವಿದ್ಯಾರ್ಥಿ, ಮುಂಬೈಯ ಖ್ಯಾತ ಉದ್ಯಮಿ, 'ಹೇರಂಭ' ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಶೆಟ್ಟಿ, ಕುಳೂರು ಕನ್ಯಾನ ಇವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು 'ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳ ಜೊತೆಗೆ ಮಕ್ಕಳನ್ನು ಆಕರ್ಷಿಸುವ ಚಟುವಟಿಕೆಗಳು ನಡೆದರೆ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳು ಉಳಿಯುವವು. ಈ ಸಮಯದಲ್ಲಿ ನಮ್ಮಿಂದಾಗುವ ಸಹಕಾರವನ್ನು ಕೊಡಲು ಮುಂದೆ ಬಂದರೆ ಶಿಕ್ಷಣ ಸಂಸ್ಥೆಗಳು ಅಭಿವೃದ್ಧಿ ಹೊಂದುವುದರಲ್ಲಿ ಸಂಶಯವಿಲ್ಲ' ಎಂದರು. ಈ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನಾರಾಯಣ ನೈಾಕ್ ನಡುಹಿತ್ಲು, ಶ್ರೀಮತಿ ಮೋಹಿನಿ ಶೆಟ್ಟಿ ಮಜ್ಜಾರ್, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಅಧ್ಯಕ್ಷರಾದ ಸತೀಶ್ ಎಲಿಯಾಣ ಮೊದಲಾದವರು ಉಪಸ್ಥಿತರಿದ್ದರು.

                ಇದೇ ಸಂದರ್ಭದಲ್ಲಿ ಶಾಲೆಯ ಹಲವು ಅಭಿವೃದ್ಧಿ ಕಾರ್ಯಗಳಲ್ಲಿ ಮಹಾ ಪೋಷಕರಾಗಿ ಕೈ ಜೋಡಿಸಿದ ಶಾಲಾ ಹಳೆ ವಿದ್ಯಾರ್ಥಿಗಳೂ, 'ಹೇರಂಭ' ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಹಾಗೂ ರಘುರಾಮ ಶೆಟ್ಟಿ ಕುಳೂರು ಕನ್ಯಾನ ಇವರನ್ನು ಶಾಲಾ ಪರವಾಗಿ ಸನ್ಮಾನಿಸಲಾಯಿತು. ಪ್ರೀ ಪ್ರೈಮರಿ ವಿಭಾಗದ ಮಕ್ಕಳಿಗೆ ಕೊಡುಗೆಯಾಗಿ ದೊರೆತ ಪಾಠ ಪುಸ್ತಕಗಳ ವಿತರಣೆಯನ್ನು ಮಾಡಲಾಯಿತು. ಈ ಪಾಠ ಪುಸ್ತಕಗಳ ಪ್ರಾಯೋಜಕತ್ವವನ್ನು ವಹಿಸಿದ ನವೀನ್ ಶೆಟ್ಟಿ ಮಜ್ಜಾರ್ ಹಾಗೂ ಶಾಲೆಯ ಮುಂದಿನ ಯೋಜನೆಯಾದ ಶಾಲಾ ಮಕ್ಕಳ ಆಟದ ಉದ್ಯಾನದ ಪ್ರಾಯೋಜಕತ್ವವನ್ನು ವಹಿಸಿರುವ ಮೋಹನ್ ಶೆಟ್ಟಿ ಮಜ್ಜಾರ್ ಇವರ ಅನುಪಸ್ಥಿತಿಯಲ್ಲಿ ಅವರ ಮಾತೃಶ್ರೀಯಾದ ಮೋಹಿನಿ ಶೆಟ್ಟಿ ಮಜ್ಜಾರ್ ಇವರನ್ನು ಅಭಿನಂದಿಸಲಾಯಿತು.

             ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.























Sunday 11 July 2021

ಆಟದ ಉದ್ಯಾನದ ನಿರ್ಮಾಣಕ್ಕೆ ಶ್ರಮದಾನ

          ಕುಳೂರು ಶಾಲೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ಮಕ್ಕಳ ಆಟದ ಉದ್ಯಾನವನ್ನು ನಿರ್ಮಿಸಲು ಈಗಾಗಲೇ ಯೋಜನೆ ರೂಪಿಸಿದ್ದು, ಇದರಂಗವಾಗಿ ಈ ಯೋಜನೆಯ ಪ್ರಾಯೋಜಕತ್ವವನ್ನು ವಹಿಸಿರುವ ಶಾಲಾ ಹಳೆ ವಿದ್ಯಾರ್ಥಿ ಹಾಗೂ ಮುಂಬೈಯ ಖ್ಯಾತ ಉದ್ಯಮಿ ಮೋಹನ್ ಶೆಟ್ಟಿ ಮಜ್ಜಾರ್ ಇವರು ಶಾಲೆಗೆ ಭೇಟಿಯಿತ್ತು, ಕಾಮಗಾರಿ ಪ್ರಾರಂಭಿಸಿಸಲು ಸೂಚಿಸಿರುವ ಬೆನ್ನಲ್ಲೇ, ಆಟದ ಉದ್ಯಾನ ನಿರ್ಮಿಸುವ ಸ್ಥಳವನ್ನು ಶ್ರಮದಾನ ಮಾಡುವ ಮೂಲಕ ಶುಚೀಕರಣ ಮಾಡಲಾಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಈ ಶ್ರಮದಾನ ಕಾರ್ಯದಲ್ಲಿ ಕೈ ಜೋಡಿಸಿದರು.  


ಮೋಹನ್ ಶೆಟ್ಟಿ ಮಜ್ಜಾರ್ ಶಾಲೆಗೆ ಭೇಟಿಯಿತ್ತ ಸಂದರ್ಭ...