FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday 14 November 2021

ಸಂಭ್ರಮದ ಮಕ್ಕಳ ದಿನಾಚರಣೆ

           ದೇಶವೇ ಕೊರೋನ ಕಾರಣದಿಂದ ತತ್ತರಿಸಿ, ಹತ್ತು ಹಲವು ಕಾರ್ಯಕ್ರಮಗಳು ಸ್ಥಗಿತವಾಗಿ ಸಂಭ್ರಮದ ಕಳೆ ಇಲ್ಲದಂತಾಗಿದೆ. ಕಳೆದ ಒಂದೂವರೆ ವರ್ಷದಿಂದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇಲ್ಲದೆ ಹಬ್ಬದ ವಾತಾವರಣವನ್ನು ಮರೆ ಮಾಚಿರುವ ಶಾಲೆಯು ಮತ್ತೆ ಮಕ್ಕಳಲ್ಲಿ ಸಂಭ್ರಮವನ್ನು ತಂದು ಕೊಡುವಲ್ಲಿ ಇದೀಗ ಮುನ್ನಡೆಯುತ್ತಿದೆ.

          ಮಕ್ಕಳು ಮೊದಲಿನಂತೆ ಸಂಭ್ರಮದಿಂದ ಆಚರಣೆಗಳನ್ನು ಆಚರಿಸುವಂತಾಗಬೇಕು ಎನ್ನುವ ಕಾರಣಕ್ಕೆ ಭಾರತದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರುರವರ ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಜೊತೆಗೆ ಶಾಲೆಯಲ್ಲಿ ಮಕ್ಕಳ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸಲು ಇರುವ ಬಾಲ ಸಭೆಯ ಉದ್ಘಾಟನೆಯೂ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮೀಂಜ ಗ್ರಾಮ ಪಂಚಾಯತಿನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಾರ್ಡ್ ಸದಸ್ಯರಾದ ಜನಾರ್ದನ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ, ಶಾಲಾಭಿವದ್ಧಿ ಸಮಿತಿ ಸದಸ್ಯರಾದ ನಾರಾಯಣ ನೈಕ್ ನಡುಹಿತ್ಲು ಆಗಮಿಸಿದ್ದರು. ಮಾತೆಯರ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಪ್ರಫುಲ್ಲ ವೈ ಶೆಟ್ಟಿ ಪೊಯ್ಯೆಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ರವರು ಪ್ರಾಸ್ತಾವಿಕ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಜಯರಾಜ್ ಶೆಟ್ಟಿ ಚಾರ್ಲ, ಮೀಯಪದವು ಪ್ರೌಢ ಶಾಲೆಯ ಶಿಕ್ಷಕ ಹರೀಶ್ ನಾಯಕ್ ಮೊದಲಾದವರು ಶುಭ ಹಾರೈಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ಶಿಕ್ಷಕಿ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು. ಶಾಲೆಗೆ ಫೋಕಸ್ ಲೈಟ್ ಒದಗಿಸಿದ ಯೋಗೀಶ್ ಶೆಟ್ಟಿ ಪೊಯ್ಯೆಲ್, ಬಹುಮಾನವನ್ನು ಪ್ರಾಯೋಜಿಸಿದ ಹಳೆ ವಿದ್ಯಾರ್ಥಿ ಸಂಘ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲು ಶಾಲಾ ಶಿಕ್ಷಕರೊಂದಿಗೆ ಕೈ ಜೋಡಿಸಿದ ಜಯರಾಜ್ ಶೆಟ್ಟಿ ಚಾರ್ಲರವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

         ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

         ಮಧ್ಯಾಹ್ನ ನಂತರ ಮೀಂಜ ಪಂಚಾಯತಿನ ಕುಳೂರು ಕುಟುಂಬಶ್ರೀ ಘಟಕ ಹಾಗೂ ಫ್ರೆಂಡ್ಸ್ ಕುಳೂರು ಲೈಬ್ರೆರಿ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಹಲವು ಸ್ಪರ್ಧೆಗಳು ನಡೆದವು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನೂ ವಿತರಿಸಲಾಯಿತು. ಸಿ.ಡಿ.ಎಸ್ ಸದಸ್ಯೆಯರಾದ ಸುಚಿತ್ರ, ಚಂದ್ರಾವತಿ ವಿ. ಪಿ, ಕುಶಲಾಕ್ಷಿ ಎಲಿಯಾಣ ಮೊದಲಾದವರು ನೇತೃತ್ವ ವಹಿಸಿದ್ದರು.
















































No comments:

Post a Comment