FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Sunday 30 October 2022

ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆ

         ಕುಳೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಉಪಾಧ್ಯಕ್ಷರಾದ ಶ್ರೀಯುತ ಬಾಲಕೃಷ್ಣ ಶೆಟ್ಟಿ ಪೊಯ್ಯೆಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಎಲ್ಲರನ್ನೂ ಸ್ವಾಗತಿಸಿದರು. ಶಾಲಾ  ಶಿಕ್ಷಕರಾದ ಜಯಪ್ರಶಾಂತ್ ಪಾಲೆಂಗ್ರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಂಬರುವ ಮಕ್ಕಳ ದಿನಾಚರಣೆ, ಶಾಲಾ ಶತಮಾನೋತ್ಸವ ಸಮಿತಿ ರೂಪೀಕರಣದ ಸಭೆ ಮೊದಲಾದ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸೇರಿದ್ದ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

        ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸುಧಾಕರ ಶೆಟ್ಟಿಯವರು ಧನ್ಯವಾದ ಸಮರ್ಪಿಸಿದರು.






Saturday 29 October 2022

ಮಾದಕ ದ್ರವ್ಯ ಮುಕ್ತ ಕೇರಳ ಅಭಿಯಾನ

         ಕೇರಳವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ಇಂದು ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ಷಕರಿಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

         ಆ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ವಹಿಸಿದ್ದರು. ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತಾ ಕುಳೂರು, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ಮಿಂಚಿದ ಶಾಲಾ ಪ್ರತಿಭೆಗಳಿಗೆ ಸರ್ಟಿಫಿಕೇಟ್ ನೀಡುವುದರೊಂದಿಗೆ ಅಭಿನಂದನೆ ಸಲ್ಲಿಸಲಾಯಿತು. ವೃತ್ತಿ ಪರಿಚಯ ಮೇಳದಲ್ಲಿ ಉಪ ಜಿಲ್ಲೆಯಲ್ಲಿ ಸಮಗ್ರ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದ ಎಲ್ಲರಿಗೂ ಅಭಿನಂದನೆ ಸಲ್ಲಿಸಲಾಯಿತು. 

       ಬಳಿಕ ಶಾಲಾ ಶಿಕ್ಷಕಿ ಸೌಮ್ಯ ಪಿ ಹಾಗೂ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ರವರು ರಕ್ಷಕರಿಗೆ ಮಾದಕವಸ್ತು ಮುಕ್ತ ಕೇರಳ ಅಭಿಯಾನದ ಅಂಗವಾಗಿ ವಿಶೇಷ ತರಗತಿಯನ್ನು ನಡೆಸಿಕೊಟ್ಟರು. 

       ಶಾಲಾ ಶಿಕ್ಷಕಿ ಅಶ್ವಿನಿ ಎಂ ಸ್ವಾಗತಿಸಿ, ಶಿಕ್ಷಕಿ ಚೇತನ ವಂದಿಸಿದರು. ಶಿಕ್ಷಕರಾದ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

















ಒಕ್ಟೋಬರ್ 2022 - ನಾಲ್ಕನೇ ವಾರದ ಮಧ್ಯಾಹ್ನದೂಟಕ್ಕೆ ಸಹಕರಿಸಿದವರು

 


Wednesday 26 October 2022

ದೀಪಾವಳಿ ಆಚರಣೆ

        ಬೆಳಕಿನ ಹಬ್ಬ ದೀಪಾವಳಿಯನ್ನು ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಳವಾಗಿ ಆಚರಿಸಲಾಯಿತು. 

        ಆ ಪ್ರಯುಕ್ತ ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ರವರು ದೀಪಾವಳಿ ಹಬ್ಬದ ಹಿನ್ನೆಲೆಯನ್ನು ಮಕ್ಕಳಿಗೆ ತಿಳಿಸಿದರು.

        ಬಳಿಕ ಸಾಲು ಹಣತೆಗಳನ್ನು ಬೆಳಗಿಸುವ ಮೂಲಕ ಕತ್ತಲೆಯಿಂದ ಬೆಳಕಿನೆಡೆಗೆ ಎಂಬ ಸಂದೇಶದೊಂದಿಗೆ ಮಕ್ಕಳಿಗೆ ಶುಭ ಹಾರೈಸಲಾಯಿತು. ಜೊತೆಗೆ ಪಟಾಕಿಗಳನ್ನು ಹಚ್ಚುವ ಮೂಲಕ ಮಕ್ಕಳ ಸಂಭ್ರಮಕ್ಕೆ ಇನ್ನಷ್ಟು ಪುಷ್ಟಿ ನೀಡಲಾಯಿತು. ಬಳಿಕ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು. 

















Thursday 6 October 2022

ಮಾದಕ ದ್ರವ್ಯ ಮುಕ್ತ ಕೇರಳ ಅಭಿಯಾನದ ಶಾಲಾ ಮಟ್ಟದ ಉದ್ಘಾಟನೆ:

           ಕೇರಳವೂ ಸೇರಿದಂತೆ ದೇಶದ ಹಲವು ರಾಜ್ಯಗಳು ಈಗ ಎದುರಿಸುತ್ತಿರುವ ಪಿಡುಗು ಎಂದರೆ ಮಾದಕ ದ್ರವ್ಯ ಸೇವನೆಯಲ್ಲಿ ಯುವ ಜನತೆ ದಾರಿ ತಪ್ಪುತ್ತಿರುವುದು. ಈ ಪಿಡುಗು ಇದೀಗ ಶಾಲಾ ಮಕ್ಕಳ ಬುಡಕ್ಕೂ ಕಾಲಿಟ್ಟಿದ್ದು ಎಲ್ಲರಲ್ಲೂ ಆತಂಕವನ್ನು ಹುಟ್ಟು ಹಾಕಿದೆ. ಇದರ ಹಿಂದೆ ದೊಡ್ಡ ಜಾಲವೇ ಇದ್ದು, ಇದನ್ನು ನಿರ್ನಾಮ ಮಾಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಇಂದು ಮಾದಕ ದ್ರವ್ಯ ಮುಕ್ತ ಕೇರಳ ರಾಜ್ಯವನ್ನಾಗಿ ಮಾಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ರಾಜ್ಯ ಮಟ್ಟದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರು ನೆರವೇರಿಸಿದ ಉದ್ಘಾಟನಾ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸುವ ವ್ಯವಸ್ಥೆ ಮಾಡಲಾಯಿತು.

         ಬಳಿಕ ಶಾಲಾ ಮಟ್ಟದ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಇಂದು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ ನೆರವೇರಿಸಿದರು. ಅಧ್ಯಕ್ಷತೆಯನ್ನು ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಬಿ.ಆರ್.ಸಿ ಯ ಸಿ.ಆರ್.ಸಿ ಕೊ-ಆರ್ಡಿನೇಟರ್ ಮೀನಾಕ್ಷಿ ಬೊಡ್ಡೋಡಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಕ ಜಯ ಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು.

         ಬಳಿಕ ರಕ್ಷಕರಿಗೆ ಹಾಗೂ ಶಾಲಾ ಮಕ್ಕಳಿಗೆ ವಿಶೇಷ ತರಗತಿಯನ್ನು ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ರವರು ನಡೆಸಿಕೊಟ್ಟರು. ರಕ್ಷಕರಿಂದ ಹಾಗೂ ಶಾಲಾ ಮಕ್ಕಳಿಂದ ಮಾದಕ ವಸ್ತುಗಳ ವಿರುದ್ಧವಾಗಿ, ಜನರಲ್ಲಿ ಜಾಗೃತಿ ಮೂಡಿಸಲು ಭಿತ್ತಿ ಪತ್ರ ರಚನೆ ಮಾಡಿಸಲಾಯಿತು. ಈ ಭಿತ್ತಿ ಪತ್ರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವುದು ಎಂದು ತೀರ್ಮಾನಿಸಿ, ಮುನ್ನಡೆಯಲಾಯಿತು. ಜೊತೆಗೆ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞೆ ಸ್ವೀಕರಿಸಲಾಯಿತು. ಶಾಲಾ ಶಿಕ್ಷಕ ವೃಂದ ಸಹಕರಿಸಿದರು.