FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 20 March 2023

ನಾಲ್ಕನೇ ತರಗತಿ ಮಕ್ಕಳ ಬೀಳ್ಕೊಡುಗೆ ಸಮಾರಂಭ:

        ಕುಳೂರು ಶಾಲೆಯ ನಾಲ್ಕನೇ ತರಗತಿಯ ಮಕ್ಕಳ ಬೀಳ್ಕೊಡುಗೆ ಸಮಾರಂಭ ನಡೆಯಿತು. 

       ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮ ಪಿ ರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕಿ ಸೌಮ್ಯ ಪಿ ವಹಿಸಿದ್ದರು. ಶಾಲಾ ಶಿಕ್ಷಕರಾದ ಜಯಪ್ರಶಾಂತ್ ಪಾಲೆಂಗ್ರಿ, ನಯನ ಎಂ, ಅಶ್ವಿನಿ ಎಂ ಹಾಗೂ ಚೇತನ ಉಪಸ್ಥಿತರಿದ್ದರು.

       ಮಕ್ಕಳು ಹಾಗೂ ರಕ್ಷಕರು ಶಾಲಾ ದಿನಗಳ ಬಗ್ಗೆ ಮೆಲುಕು ಹಾಕಿ, ಭಾವುಕರಾದರು. ಮಕ್ಕಳ ಜೊತೆ ರಕ್ಷಕರೂ ಶಾಲೆಯನ್ನು ಬಿಟ್ಟು ಹೋಗಲು ಮನಸ್ಸಾಗದಿರುವುದು ಅವರ ಕಣ್ಣಂಚಿನಲ್ಲಿ ಮೂಡಿದ ಕಣ್ಣೀರು ಸಾಕ್ಷಿಯಾಯಿತು. ವಿದ್ಯಾರ್ಥಿಗಳಾದ ಜೀಯ ಜೆ ಶೆಟ್ಟಿ, ಸಾನ್ವಿಕ, ಲಿಪಿಕ ಪಿ, ರಕ್ಷಕರಾದ ಜಯರಾಜ್ ಶೆಟ್ಟಿ ಚಾರ್ಲ, ಉದಯ ಕುಮಾರಿ, ಸುಹಾಸಿನಿ ಮೊದಲಾದವರು ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಮಕ್ಕಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.

ವಿದ್ಯಾರ್ಥಿನಿ ಕುಮಾರಿ ಸಾನ್ವಿಕ ಸ್ವಾಗತಿಸಿ, ವಿದ್ಯಾರ್ಥಿನಿ ಕುಮಾರಿ ಜೀಯ ಜೆ ಶೆಟ್ಟಿ ವಂದಿಸಿದಳು.












No comments:

Post a Comment