FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 26 June 2023

ವಾಚನ ವಾರಾಚರಣೆಯ ಸಮಾರೋಪ ಸಮಾರಂಭ; ಮಕ್ಕಳ ಬಾಲಸಭೆ ಉದ್ಘಾಟನೆ; ಕತೋತ್ಸವಕ್ಕೆ ಚಾಲನೆ:

         ಮಕ್ಕಳಲ್ಲಿ ಪುಸ್ತಕ ಓದುವಿಕೆಯ ಆಸಕ್ತಿಯನ್ನು ಮೂಡಿಸಲು ವಿವಿಧ ಚಟುವಟಿಕೆಗಳನ್ನು ವಾಚನ ವಾರಾಚರಣೆಯೆಂಬ ಕಾರ್ಯಕ್ರಮದಲ್ಲಿ ಅಳವಡಿಸಿ ಪುಸ್ತಕ ಓದಿನ ಮಹತ್ವದ ಅರಿವನ್ನು ಮೂಡಿಸಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ವಾಚನ ವಾರಾಚರಣೆ ನಡೆಸಲಾಯಿತು. ಇದರ ಸಮಾರೋಪ ಸಮಾರಂಭ ಹಾಗೂ ಮಕ್ಕಳ ಬಾಲಸಭೆಯ ಉದ್ಘಾಟನೆಯು ಇಂದು ನಡೆಯಿತು.

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ:

         ಮಕ್ಕಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.

Friday 23 June 2023

ಶಾಲಾ ವ್ಯವಸ್ಥಾಪಕ ಸಮಿತಿಯ ಮಹಾಸಭೆ ; ನೂತನ ಸಮಿತಿ ರೂಪೀಕರಣ :

         ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ವ್ಯವಸ್ಥಾಪಕ ಸಮಿತಿ ರೂಪೀಕರಣ ಮಹಾಸಭೆ ನಡೆಯಿತು.

Wednesday 21 June 2023

ವಿಶ್ವ ಯೋಗ ದಿನಾಚರಣೆ:

        ಭಾರತದ ಭವ್ಯ ಪರಂಪರೆಯಲ್ಲಿ ಯೋಗ ವಿಶೇಷ ಸ್ಥಾನವನ್ನು ಪಡೆದಿದೆ. ವಿಶ್ವವೇ ಯೋಗವನ್ನು ಅನುಸರಿಸುತ್ತಿದ್ದು ಭಾರತದ ಸಂಸ್ಕೃತಿಯು ಇನ್ನಷ್ಟು ಶ್ರೇಷ್ಠತೆಯನ್ನು ಪಡೆಯುತ್ತಿದೆ. ಅಂತಹ ಯೋಗವು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟು ಕಳೆದ ಹಲವು ವರ್ಷಗಳಿಂದ ಜೂನ್ 21 ನ್ನು ವಿಶ್ವ ಯೋಗ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

Monday 19 June 2023

ವಾಚನ ದಿನಾಚರಣೆ:

         ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳದ ಗ್ರಂಥಾಲಯ ಪಿತಾಮಹ ಪಿ. ಎನ್. ಪಣಿಕ್ಕರ್ ರವರ ಚರಮ ದಿನವನ್ನು ವಾಚನ ದಿನಾಚರಣೆಯಾಗಿ ಆಚರಿಸಲಾಯಿತು.

Thursday 15 June 2023

ಚುನಾವಣೆಯ ಮೂಲಕ ಶಾಲಾ ನಾಯಕನ ಆಯ್ಕೆ ; ಪ್ರಜಾಪ್ರಭುತ್ವ ವ್ಯವಸ್ಥೆಯ ನೈಜ ಅನುಭವವನ್ನು ಪಡೆದ ಶಾಲಾ ಮಕ್ಕಳು :

           ಭಾರತವು ಪ್ರಪಂಚದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಈ ವ್ಯವಸ್ಥೆಯ ನೈಜ ಅನುಭವವನ್ನು ಮಕ್ಕಳು ಪಡೆಯಲು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ನಾಯಕನ ಆಯ್ಕೆಗೆ ಶಾಲಾ ಚುನಾವಣೆ ನಡೆಯಿತು.

           ಹಿಂದಿನ ದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ತಮ್ಮ ನಾಮ ಪತ್ರವನ್ನು ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಶಾಲಾ ಮುಖ್ಯ ಶಿಕ್ಷಕರ ಹೊಣೆಯನ್ನು ಹೊತ್ತಿರುವ ಶಾಲಾ ಶಿಕ್ಷಕಿ ಸೌಮ್ಯ ಪಿ ರವರಿಗೆ ಸಲ್ಲಿಸಿದರು. ಜೊತೆಗೆ ಅಭ್ಯರ್ಥಿಗಳು ಪ್ರಚಾರ ಕಾರ್ಯವನ್ನೂ ನಡೆಸಿದರು.

         ಇಂದು ನಡೆದ ಚುನಾವಣಾ ಪ್ರಕ್ರಿಯೆಯು ಮಕ್ಕಳಿಗೆ ನೈಜ ಅನುಭವವನ್ನು ತಂದಿತು. ಮತ ಚಲಾಯಿಸಲು ಬಂದ ಮಕ್ಕಳು ತಮ್ಮ ಕೈಗೆ ಚುನಾವಣಾ ಗುರುತನ್ನು ಹಾಕಿಸಿಕೊಂಡು, ಗೌಪ್ಯ  ಮತದಾನದ ಮೂಲಕ ತಮ್ಮ ನೆಚ್ಚಿನ ಅಭ್ಯರ್ಥಿಗೆ ಮತವನ್ನು ಚಲಾಯಿಸಿದರು.

        ಚುನಾವಣಾ ಪ್ರಕ್ರಿಯೆಯನ್ನು ಶಾಲಾ ಮಕ್ಕಳೇ ನಿರ್ವಹಿಸಿದ್ದು ವಿಶೇಷವಾಗಿತ್ತು. ಶಾಲಾ ವಿದ್ಯಾರ್ಥಿಗಳಾದ ಕುಮಾರಿ ಸಾಕ್ಷಿ ಎ, ಯದ್ವಿ ಕೆ ಶೆಟ್ಟಿ, ದೀಕ್ಷ ಎ, ಗಣ್ಯ, ಕಿಶನ್ ಡಿ ಹಾಗೂ ಪ್ರಜ್ವಲ್ ಡಿ ಈ ಪ್ರಕ್ರಿಯೆಯಲ್ಲಿ ಸಹಕರಿಸಿದರು.

      ಬಳಿಕ ಚುನಾವಣಾ ಅಭ್ಯರ್ಥಿಗಳ ಸಮ್ಮುಖದಲ್ಲಿ ಮತ ಎಣಿಕೆ ನಡೆಯಿತು. ತೀವ್ರ ಪೈಪೋಟಿಯನ್ನು ಇತ್ತ ಇಬ್ಬರು ಅಭ್ಯರ್ಥಿಗಳು ಅಂತಿಮವಾಗಿ ಸಮಾನ ಮತಗಳನ್ನು ಪಡೆಯುವ ಮೂಲಕ ಚುನಾವಣೆಯನ್ನು ಇನ್ನಷ್ಟು ರಂಗೇರುವಂತೆ ಮಾಡಿದರು. ಬಳಿಕ ಚೀಟಿ ಎತ್ತುವ ಮೂಲಕ ನಾಯಕ ಹಾಗೂ ಉಪ ನಾಯಕರನ್ನು ಆಯ್ಕೆ ಮಾಡಲಾಯಿತು. ಶಾಲಾ ನಾಯಕನಾಗಿ ಚಾರ್ವಿನ್ ಆಳ್ವ, ಉಪ ನಾಯಕಿಯಾಗಿ ಕುಮಾರಿ ಸಾನ್ವಿ ಶೆಟ್ಟಿ ಆಯ್ಕೆಯಾದರು. ಆರೋಗ್ಯ ಮಂತ್ರಿಯಾಗಿ ಕುಮಾರಿ ತನ್ವಿ ಎಸ್ ಪೂಜಾರಿ, ಕ್ರೀಡಾ ಮಂತ್ರಿಯಾಗಿ ಕುಮಾರಿ ಶ್ರೀನಿಕ ವಿ. ಆರ್ ಹಾಗೂ ಸಾಂಸ್ಕೃತಿಕ ಮಂತ್ರಿಯಾಗಿ ಕುಮಾರಿ ದೃಶ ಎ ಆಯ್ಕೆಯಾದರು.

        ಶಾಲಾ ಮುಖ್ಯ ಶಿಕ್ಷಕರ ಹೊಣೆಯನ್ನು ಹೊತ್ತಿರುವ ಶಿಕ್ಷಕಿ ಸೌಮ್ಯ ಪಿ ವಿಜೇತ ಅಭ್ಯರ್ಥಿಗಳಿಗೆ ಹೂ ಗುಚ್ಛ ನೀಡಿ ಅಭಿನಂದಿಸಿ, ಬಳಿಕ ಪ್ರಮಾಣ ವಚನ ಬೋಧಿಸಿದರು. ಬಳಿಕ ವಿಜೇತ ಅಭ್ಯರ್ಥಿಗಳ ವಿಜಯ ಘೋಷ ಯಾತ್ರೆ ನಡೆಯಿತು.  ಶಾಲಾ ಶಿಕ್ಷಕ ವೃಂದ ಜೊತೆಗಿದ್ದು ಸಹಕರಿಸಿದರು. 
















Monday 5 June 2023

ವಿಶ್ವ ಪರಿಸರ ದಿನಾಚರಣೆ:

       ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. 

       ಪರಿಸರ ಸಂರಕ್ಷಣೆಯ ಕುರಿತು ಮಕ್ಕಳಿಗೆ ಅರಿವು ಮೂಡಿಸಲಾಯಿತು. ಶಾಲಾ ಪರಿಸರದಲ್ಲಿ ಗಿಡ ನೆಡಲಾಯಿತು. ಮಕ್ಕಳಿಗೆ ಪೋಸ್ಟರ್ ತಯಾರಿ, ಚಿತ್ರ ರಚನೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನೂ ಆಯೋಜಿಸಲಾಯಿತು.

      ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಪರಿಸರವನ್ನು ಶುಚೀಕರಣ ಮಾಡಲಾಯಿತು. ಹಳೆ ವಿದ್ಯಾರ್ಥಿಗಳಾದ ಹರಿರಾಮ ಕುಳೂರು ಹಾಗೂ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಜೊತೆಗಿದ್ದು ಸಹಕರಿಸಿದರು. ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮವನ್ನು ಸಂಯೋಜಿಸಿದರು. 









Thursday 1 June 2023

ಮೀಂಜ ಪಂಚಾಯತು ಮಟ್ಟದ ಶಾಲಾ ಪ್ರವೇಶೋತ್ಸವ :

           ಕೇರಳದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಊರಿನ ಹೆಮ್ಮೆಯ ಕೇಂದ್ರಗಳನ್ನಾಗಿಸುವ ದೃಷ್ಟಿಯಿಂದ ಸಾರ್ವಜನಿಕರು ಶಾಲೆಗಳತ್ತ ಗಮನ ಸೆಳೆಯುವಂತೆ ಮಾಡಲು ಸರಕಾರವು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದರಂತೆ ಶಾಲಾರಂಭದ ದಿನವನ್ನು ಶಾಲಾ ಪ್ರವೇಶೋತ್ಸವ ಎಂಬ ಸಂಭ್ರಮದ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಸಂಬಂಧ ಮೀಂಜ ಪಂಚಾಯತು ಮಟ್ಟದ ಶಾಲಾ ಪ್ರವೇಶೋತ್ಸವವು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಜರಗಿತು.