ಭಾರತ ದೇಶ ಹಾಗೂ ಇತರ ಅನೇಕ ದೇಶಗಳಲ್ಲಿ ಪಿಡುಗಾಗಿ ಕಾಡುತ್ತಿರುವ ಬಾಲಕಾರ್ಮಿಕತನವನ್ನು ಹೋಗಲಾಡಿಸಲು ಸರಕಾರಗಳು ಅನೇಕ ಕಾರ್ಯಕ್ರಮಗಳು, ಯೋಜನೆಗಳನ್ನು ರೂಪಿಸುತ್ತಾ ಬಂದಿವೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತೀ ವರ್ಷ ಜೂನ್ 12 ರಂದು ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಆ ಪ್ರಯುಕ್ತ ಇಂದು ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು ವಿಶೇಷ ಅಸೆಂಬ್ಲಿಯನ್ನು ಕರೆಯಲಾಯಿತು. ಬಾಲಕಾರ್ಮಿಕತನದ ಕುರಿತಾಗಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಮಕ್ಕಳಿಗೆ ಅರಿವನ್ನು ಮೂಡಿಸಿದರು. ಬಳಿಕ ಶಾಲಾ ವಿದ್ಯಾರ್ಥಿ ಪ್ರಥಮ್ ಭಾರದ್ವಾಜ್ ಪಿ.ಎಚ್. ಬಾಲಕಾರ್ಮಿಕತನದ ವಿರುದ್ಧವಾದ ಪ್ರತಿಜ್ಞೆಯನ್ನು ಶಾಲಾ ವಿದ್ಯಾರ್ಥಿಗಳಿಗೆ ಬೋಧಿಸಿದನು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
No comments:
Post a Comment