ನಮ್ಮ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನ ಬಗ್ಗೆ ವಿವಿಧ ಮಾಧ್ಯಮಗಳ ಮೂಲಕ ಶಾಲೆಯ ಅಭಿವೃದ್ಧಿಯನ್ನು ತಿಳಿದು ಡಯೆಟ್ ಮಾಯಿಪ್ಪಾಡಿಯ ನಿವೃತ್ತ ಹಿರಿಯ ಪ್ರಾಧ್ಯಾಪಕರಾದ ಶ್ರೀಯುತ ಯು. ಪುರುಷೋಮ ದಾಸ್ ರವರು ಇಂದು ಶಾಲೆಗೆ ಭೇಟಿ ನೀಡಿ ಶಾಲಾಭಿವೃದ್ಧಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ತಮ್ಮ ಟಿ.ಟಿ.ಸಿ. ಶಿಷ್ಯಂದಿರಾದ ಶ್ರೀಮತಿ ಮಾಲತಿ, ಶ್ರೀಮತಿ ಸೌಮ್ಯ ಪಿ ಹಾಗೂ ಶ್ರೀ ಜಯಪ್ರಶಾಂತ್ ಪಿ ರವರಿಗೆ ಅಭಿನಂದನೆ ಸಲ್ಲಿಸಿದರು. ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಹಾಗೂ ಶಾಲಾ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.
No comments:
Post a Comment