FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 2 October 2024

ಕುಳೂರು ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ ; ಸ್ವಚ್ಚತಾ ಕಾರ್ಯಕ್ರಮ :

        ರಾಷ್ಟ್ರಪಿತ ಮೋಹನ್ ದಾಸ್ ಕರಮಚಂದ ಗಾಂಧೀಜಿಯವರ 155 ಜನ್ಮ ದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದೂರ್ ಶಾಸ್ತ್ರಿಯವರ 120 ನೇ ಜನ್ಮದಿನಾಚರಣೆಯ ಪ್ರಯುಕ್ತ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. 

      ಆ ಪ್ರಯುಕ್ತ ಕುಳೂರು ವಾರ್ಡಿನ ಪ್ರಥಮ ಪ್ರಜೆ ಶ್ರೀ ಜನಾರ್ಧನ ಪೂಜಾರಿ ಕುಳೂರು ಹಾಗೂ ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲರವರು ಈ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು. ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ಕವಿತಾ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಹಾಗೂ ಶಿಕ್ಷಕ ವೃಂದ, ಶ್ರೀಮತಿ ಜಲಜ ಪೊಯ್ಯೇಲು ಜೊತೆಗಿದ್ದರು. ಕುಳೂರು ಗ್ರಾಮದ ಉದ್ಯೋಗ ಖಾತರಿ ಯೋಜನೆಯ ತಂಡದ ಶ್ರೀಮತಿ ಸುಚಿತ್ರಾ ಕರಿಪ್ಪಾರ್ ಹಾಗೂ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಚಿಕ್ಕಪ್ಪ ಶೆಟ್ಟಿ ಹಾಗೂ ಮಜೀದ್ ಸಾಹೇಬ್ ರವರು ಶಾಲಾ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಗಳಾದರು. ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರಿಗೆ ಪುಷ್ಪ ನಮನ ಸಲ್ಲಿಸಲಾಯಿತು.








No comments:

Post a Comment