FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 7 October 2024

ಬಾಲಸಭಾದ ಬಾಲಸದಸ್ಸ್ ಕಾರ್ಯಕ್ರಮದ ಬಹುಮಾನ ವಿತರಣೆ :

         ಬಾಲಸಭಾದ ಬಾಲಸದಸ್ಸ್ ಕಾರ್ಯಕ್ರಮದ ಅಂಗವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು ಶಾಲೆಯ 4 ನೇ ತರಗತಿ ಮಕ್ಕಳಿಗೆ ನಡೆಸಿದ ಪ್ರಶ್ನೆ ಪೆಟ್ಟಿಗೆ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಇಂದು ನಡೆಯಿತು. 

       ಶಾಲಾ ಅಸಂಬ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಳೂರು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಯವರು ಪ್ರಥಮ ಸ್ಥಾನ ಪಡೆದ ನಿಶ್ವಿತ್, ದ್ವಿತೀಯ ಸ್ಥಾನ ಪಡೆದ ವಂಶಿಕ್ ಇವರಿಗೆ ಬಹುಮಾನ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಸಿ.ಡಿ.ಎಸ್. ಸದಸ್ಯೆ ಶ್ರೀಮತಿ ಕುಶಲಾಕ್ಷಿ, ಕಮ್ಯೂನಿಟಿ ಮೆಂಟರ್ ಪದ್ಮಜ, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಸ್ಪರ್ಧೆ ಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. 



No comments:

Post a Comment