ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಕುಳೂರು ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಆ ಪ್ರಯುಕ್ತ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದೊಂದಿಗೆ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಸದಸ್ಯರಾದ ಪ್ರೇಮ ಜಿ ಶೆಟ್ಟಿ ಚಾರ್ಲ, ರೂಪ ಕುಳೂರು ಪಾದೆ ಮೊದಲಾದವರು ಕೈ ಜೋಡಿಸಿ ಶಾಲಾ ಪರಿಸರ ಸ್ವಚ್ಚ ಮಾಡುವುದರೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಹಕರಿಸಿದ ಎಲ್ಲರಿಗೂ ಶಾಲಾ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಲಾಯಿತು.
No comments:
Post a Comment