ಕಳೆದ ಒಂದೂವರೆ ವರ್ಷದಿಂದ ಮಕ್ಕಳ ಕಲರವ ಇಲ್ಲದ ಶಾಲೆಯು ಬರುವ ನವೆಂಬರ್ ತಿಂಗಳಲ್ಲಿ ಸರಕಾರದ ಸೂಚನೆಯ ಮೇರೆಗೆ ಮತ್ತೆ ಮಕ್ಕಳ ಚಟುವಟಿಕೆಗಳಿಗೆ ಸಜ್ಜಾಗುತ್ತಿದೆ. ಎಲ್ಲರೂ ಈ ದಿನಕ್ಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದುದು ಎಲ್ಲರಿಗೂ ತಿಳಿದ ವಿಚಾರ. ಹಿಂದಿನ ಆ ಸಂಭ್ರಮದ ದಿನಗಳು ಮತ್ತೆ ಮರುಕಳಿಸಲಿ ಎಂಬುದು ಎಲ್ಲರ ಆಶಯ.
ನವೆಂಬರ್ 1 ರಿಂದ ಮಕ್ಕಳಿಗೆ ಶಾಲೆಯಲ್ಲಿ ಚಟುವಟಿಕೆಗಳು ಮುಂದುವರಿಯಲಿದ್ದು ಆ ಸಲುವಾಗಿ ಇಂದು ಶಾಲಾ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ಸ್ವಾಗತಿಸಿ, ಎಸ್.ಆರ್.ಜಿ ಕನ್ವೀನರ್ ಶಿಕ್ಷಕಿ ನಯನ ಎಂ ವಂದಿಸಿದರು. ಕಾರ್ಯಕಾರಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
No comments:
Post a Comment