FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday, 28 October 2021

ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ, ರಕ್ಷಕರಿಗೆ ತರಬೇತಿ

         ಕೊರೋನ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಮಕ್ಕಳ ಚಟುವಟಿಕೆಗಳಿಂದ ಕಳೆಗಟ್ಟಿದ್ದ ಶಾಲೆಯು ನವೆಂಬರ್ ಒಂದರಿಂದ ಪ್ರಾರಂಭವಾಗಲಿದ್ದು, ಈ ನಿಟ್ಟಿನಲ್ಲಿ ಶಾಲಾ ಮಕ್ಕಳ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯನ್ನು ಇಂದು ನಡೆಸಲಾಯಿತು.

          ಸಭೆಯ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು, ಉಪಾಧ್ಯಕ್ಷೆ ಸುಪ್ರೀತಾ ಕುಳೂರು ಹೊಸಮನೆ, ಪ್ರೀ ಪ್ರೈಮರಿ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ ಉಪಸ್ಥಿತರಿದ್ದರು.

          ಇದೇ ಸಂದರ್ಭದಲ್ಲಿ ರಕ್ಷಕರು ತರಬೇತಿ ಕಾರ್ಯಕ್ರಮವೂ ನಡೆಯಿತು. ಈ ತರಬೇತಿಯನ್ನು ಶಾಲಾ ಶಿಕ್ಷಕಿ ನಯನ ಎಂ ನಡೆಸಿಕೊಟ್ಟರು. 

         ಈ ಹಿಂದಿನ ಶಾಲಾ ಚಟುವಟಿಕೆಗಳ ಸಮಗ್ರ ವರದಿಯನ್ನು ಶಾಲಾ ಶಿಕ್ಷಕಿ ಸೌಮ್ಯ ಪಿ ವಾಚಿಸಿದರು. ಲೆಕ್ಕ ಪತ್ರ ಮಂಡನೆಯನ್ನು ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಮಾಡಿದರು. ಬಳಿಕ 2021-22 ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸತೀಶ್ ಎಲಿಯಾಣ, ಉಪಾಧ್ಯಕ್ಷರಾಗಿ ರಾಜಲಕ್ಷ್ಮಿ ದೇರಂಬಳ ಗುತ್ತು ಅವಿರೋಧವಾಗಿ ಆಯ್ಕೆಯಾದರು. ಜೊತೆಗೆ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.

          ನೂತನ ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಪ್ರಫುಲ್ಲ ಪೊಯ್ಯೆಲ್, ಉಪಾಧ್ಯಕ್ಷೆಯಾಗಿ ಪ್ರೇಮ ಜಿ ಶೆಟ್ಟಿ ಚಾರ್ಲ ಅವಿರೋಧವಾಗಿ ಆಯ್ಕೆಯಾದರು. ಜೊತೆಗೆ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.

          ಕೊರೋನ ಕಾಲ ಘಟ್ಟದಲ್ಲಿ ಸರಕಾರದ ಆದೇಶದ ಮೇರೆಗೆ ಶಾಲಾ ಆರೋಗ್ಯ ಸಮಿತಿ ಹಾಗೂ ಮಧ್ಯಾಹ್ನದೂಟದ ಕಾರ್ಯಕ್ರಮಕ್ಕೆ ನೂತನ ಸಮಿತಿಯನ್ನೂ ಈ ಸಂದರ್ಭದಲ್ಲಿ ರಚಿಸಲಾಯಿತು.

           ಶಾಲಾ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ಎಂ ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.










          

No comments:

Post a Comment