ನವೆಂಬರ್ ಒಂದರಿಂದ ಶಾಲಾರಂಭವಾಗುವ ಹಿನ್ನೆಲೆಯಲ್ಲಿ ಶಾಲೆಯನ್ನು ಸಜ್ಜುಗೊಳಿಸುವ ಸಲುವಾಗಿ ಶಾಲಾ ಕೊಠಡಿಗಳು ಹಾಗೂ ಪೀಠೋಪಕರಣಗಳನ್ನು ಶುಚಿಗೊಳಿಸುವ ಕಾರ್ಯ ಇಂದು ಶಾಲಾ ರಕ್ಷಕ-ಶಿಕ್ಷಕ ಸಂಘದ ನೇತೃತ್ವದಲ್ಲಿ ನಡೆಯಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರು ಈ ಕಾರ್ಯದಲ್ಲಿ ಕೈ ಜೋಡಿಸಿ ಮಕ್ಕಳ ಬರುವಿಕೆಗೆ ಶಾಲೆಯನ್ನು ಸಂಪೂರ್ಣವಾಗಿ ಸಜ್ಜುಗೊಳಿಸಲಾಯಿತು.
ಇದೇ ಸಂದರ್ಭದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣರವರ ನೇತೃತ್ವದಲ್ಲಿ ಕ್ರಿಮನಾಶಕ ಸಿಂಪಡಣೆ ಮಾಡಲಾಯಿತು. ಈ ಕಾರ್ಯದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಹರಿಪ್ರಸಾದ್ ಎಲಿಯಾಣ ಹಾಗೂ ರಿತೇಶ್ ಕುಳೂರು ಸಹಕರಿಸಿದರು. ಶಾಲಾ ಪರವಾಗಿ ಇವರಿಗೆ ಅಭಿನಂದನೆ ಸಲ್ಲಿಸಲಾಯಿತು.
No comments:
Post a Comment