ಕೇರಳದ ಗ್ರಂಥಾಲಯ ಪಿತಾಮಹ ಎಂದೆನಿಸಿಕೊಂಡಿರುವ ಪಿ.ಎನ್. ಪಣಿಕ್ಕರ್ ರವರ ಚರಮ ದಿನವನ್ನು ವಾಚನಾ ದಿನಾಚರಣೆಯಾಗಿ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.
FLASH NEWS
Wednesday 19 June 2024
ಕುಳೂರು ಶಾಲಾ ಕಟ್ಟಡಕ್ಕೆ ಸಿಡಿಲು ಬಡಿತ ; ಶಾಲಾ ಕಟ್ಟಡ ಹಾಗೂ ವಿದ್ಯುತ್ ಉಪಕರಣಗಳಿಗೆ ಹಾನಿ :
ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿಡಿಲ ಬಡಿತಕ್ಕೆ ಶಾಲಾ ಕಟ್ಟಡ ಹಾಗೂ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ.
ವರ್ಕಾಡಿ ಕೆ.ಇ.ಬಿ. ವತಿಯಿಂದ ಶಾಲಾ ಮಕ್ಕಳಿಗೆ ಮಾಹಿತಿ ಶಿಬಿರ :
ವರ್ಕಾಡಿಯ ಕೇರಳ ಎಲೆಕ್ಟ್ರಿಕ್ ಬೋರ್ಡ್ ವತಿಯಿಂದ ಶಾಲಾ ಮಕ್ಕಳಿಗೆ ವಿದ್ಯುತ್ ಬಳಕೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಶಿಬಿರವು ನಡೆಯಿತು.
Wednesday 5 June 2024
ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ :
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರವು ನೀಡಿದ ಸಮವಸ್ತ್ರದ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣರವರು ಸಮವಸ್ತ್ರವನ್ನು ಮಕ್ಕಳಿಗೆ ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ವಿಶ್ವ ಪರಿಸರ ದಿನಾಚರಣೆ :
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಪರಿಸರ ಗೀತೆ ಹಾಡಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಸಂಘಟಿಸಿದರು.
Monday 3 June 2024
ಕುಳೂರು ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರವೇಶೋತ್ಸವ :
ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಆರಂಭದ ದಿನವನ್ನು ಶಾಲಾ ಪ್ರವೇಶೋತ್ಸವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.
ರಾಜ್ಯದ ಮುಖ್ಯಮಂತ್ರಿ ಶ್ರೀ ಪಿನರಾಯಿ ವಿಜಯನ್ ರವರು ಉದ್ಘಾಟಿಸಿದ ರಾಜ್ಯಮಟ್ಟದ ಶಾಲಾ ಪ್ರವೇಶೋತ್ಸವದ ಪ್ರಸಾರವನ್ನು ಮಾಡಲಾಯಿತು.
ಬಳಿಕ ಶಾಲಾ ಮಟ್ಟದ ಪ್ರವೇಶೋತ್ಸವವನ್ನು ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರುರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮೀಂಜ ಗ್ರಾಮ ಪಂಚಾಯತಿನ ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ ಕೆ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀ ನಾರಾಯಣ ನೈಕ್ ನಡುಹಿತ್ಲು, ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಶ್ರೀ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಚರಿತ ಚಿನಾಲ ಹಾಗೂ ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಚೈತ್ರ ಕಲ್ಕಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ನವಾಗತ ಮಕ್ಕಳಿಗೆ ವಿವಿಧ ಕೊಡುಗೆಗಳ ವಿತರಣೆ ನಡೆಯಿತು. ಪ್ರೀ ಪ್ರೈಮರಿ ಮಕ್ಕಳ ಸಮವಸ್ತ್ರವನ್ನು ಕೊಡುಗೆ ನೀಡಿದ ಗುಬ್ಯ ಶ್ರೀ ಶ್ರೀಧರ ಶೆಟ್ಟಿ, ಪಾಠಪುಸ್ತಕವನ್ನು ಕೊಡುಗೆ ನೀಡಿದ ಶ್ರೀಮತಿ ವಿನಯ ಸೌಜನ್ ಹಾಗೂ ಪ್ರೀ ಪ್ರೈಮರಿ ಮತ್ತು ಒಂದನೇ ತರಗತಿ ಮಕ್ಕಳಿಗೆ ಬ್ಯಾಗ್ ಕೊಡುಗೆ ನೀಡಿದ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣರವರಿಗೆ ಶಾಲಾ ಪರವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು.
ಶಾಲಾ ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅಶ್ವಿನಿ ಎಂ ವಂದಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ಕಾರ್ಯಕ್ರಮವನ್ನು ನಿರೂಪಿಸಿದರು.
ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು.
ಬಳಿಕ ನಡೆದ ರಕ್ಷಕರ ತರಬೇತಿಯನ್ನು ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ಪಿ ನಡೆಸಿಕೊಟ್ಟರು.
ಶಾಲಾ ಶಿಕ್ಷಕಿಯರಾದ ಶ್ರೀಮತಿ ಶ್ವೇತ ಇ, ಆಯಿಶತ್ ಸೆಯಿದ, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಶ್ರೀ ಸುಧಾಕರ್ ಶೆಟ್ಟಿ ಎಲಿಯಾಣ, ಸದಸ್ಯರಾದ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಶ್ರೀ ಹರಿರಾಮ ಕುಳೂರು, ಶ್ರೀ ಚಂದ್ರಹಾಸ ಪೂಜಾರಿ ಕುಳೂರು, ಶ್ರೀ ವಸಂತ ಪೂಜಾರಿ ಕುಳೂರು ಹಾಗೂ ರಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.
ಬಳಿಕ ಸಿಹಿತಿಂಡಿ ಹಾಗೂ ಮಧ್ಯಾಹ್ನದೂಟ ವಿತರಿಸಲಾಯಿತು.