FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Wednesday 19 June 2024

ಕುಳೂರು ಶಾಲೆಯಲ್ಲಿ ವಾಚನಾ ದಿನಾಚರಣೆ :

        ಕೇರಳದ ಗ್ರಂಥಾಲಯ ಪಿತಾಮಹ ಎಂದೆನಿಸಿಕೊಂಡಿರುವ ಪಿ.ಎನ್. ಪಣಿಕ್ಕರ್ ರವರ ಚರಮ ದಿನವನ್ನು ವಾಚನಾ ದಿನಾಚರಣೆಯಾಗಿ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.

       ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕರು, ಕಲಾವಿದರೂ ಆಗಿರುವ ಶ್ರೀ ಶಂಕರ ರೈ ಮಾಸ್ಟರ್ ಉದ್ಘಾಟಿಸಿ 'ಮನುಷ್ಯನ ಜ್ಞಾನ ವಿಕಾಸಕ್ಕೆ ಓದು ಅತೀ ಅಗತ್ಯ, ಅದಕ್ಕೆ ಪೂರಕವಾದ ಗ್ರಂಥಾಲಯದ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು' ಎಂದರು. ಜೊತೆಗೆ ಮಕ್ಕಳಿಗೆ ಕಥೆ ಹೇಳಿ, ಪದ್ಯ, ಅಭಿನಯ ಗೀತೆಗಳನ್ನು ಹಾಡಿ ಮಕ್ಕಳನ್ನು ಮನರಂಜಿಸಿದರು. ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯರಾದ ಶ್ರೀ ಜನಾರ್ಧನ ಪೂಜಾರಿ ಕುಳೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮೊಹಮ್ಮದ್ ಹಾಜಿ ಕಂಚಿಲ, ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಜ್ ಶೆಟ್ಟಿ ಚಾರ್ಲ ಉಪಸ್ಥಿತರಿದ್ದು ಶುಭ ಹಾರೈಸಿದರು.

       ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಅಶ್ವಿನಿ ಎಂ, ಶ್ರೀಮತಿ ಶ್ವೇತ ಇ, ಆಯಿಶತ್ ಸೆಯಿದ ಸಹಕರಿಸಿದರು‌.









No comments:

Post a Comment