ವರ್ಕಾಡಿಯ ಕೇರಳ ಎಲೆಕ್ಟ್ರಿಕ್ ಬೋರ್ಡ್ ವತಿಯಿಂದ ಶಾಲಾ ಮಕ್ಕಳಿಗೆ ವಿದ್ಯುತ್ ಬಳಕೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಶಿಬಿರವು ನಡೆಯಿತು.
ಕಾರ್ಯಕ್ರಮದಲ್ಲಿ ವರ್ಕಾಡಿ ಕೆ.ಇ.ಬಿ. ಯ ಲೈನ್ ಮೇನ್ ಶ್ರೀ ಬಿನು, ಸಿಬ್ಬಂದಿ ವರ್ಗದವರಾದ ಶ್ರೀ ಶ್ರೀಕಾಂತ್, ಶ್ರೀ ಶ್ರೀಧರ್, ಶ್ರೀ ಕಮಲಾಕ್ಷ, ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಉಪಸ್ಥಿತರಿದ್ದರು. ಮಕ್ಕಳಿಗೆ ವಿದ್ಯುತ್ ಬಳಕೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು. ಬಳಿಕ ವಿದ್ಯುತ್ ಬಳಕೆಯ ಮುಂಜಾಗ್ರತಾ ಕ್ರಮಗಳ ಮಾಹಿತಿ ಪತ್ರವನ್ನು ಶಾಲಾ ಮುಖ್ಯ ಶಿಕ್ಷಕಿಗೆ ಹಸ್ತಾಂತರಿಸಿದರು.ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಾಲತಿ ಸ್ವಾಗತಿಸಿ, ಶಿಕ್ಷಕ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು.
No comments:
Post a Comment